- Advertisement -
- Advertisement -
ಮಂಗಳೂರು: ಮಂಗಳೂರು ದಕ್ಷಿಣ ವಲಯದ ಸರ್ಕಾರಿ ಪ್ರೌಢಶಾಲೆ, ಅತ್ತಾವರದ ಸಹ ಶಿಕ್ಷಕಿ ವೀಣಾ ರಾಷ್ಟ್ರಮಟ್ಟದ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವೀಣಾ ಉತ್ತಮ ಸಾಧನೆ ಮಾಡಿದ್ದಾರೆ. ಈಜು ಸ್ಪರ್ಧೆಯಲ್ಲಿ ಮೂರು ಬೆಳ್ಳಿ ಪದಕ ಪಡೆದು ಸತತ ಎರಡನೆಯ ಬಾರಿ ರಾಷ್ಟ್ರಮಟ್ಟದ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಈಜು ತರಬೇತುದಾರ ಬಿ.ಕೆ.ನಾಯ್ಕ ಅವರು ಇವರಿಗೆ ತರಬೇತಿ ನೀಡುತ್ತಿದ್ದಾರೆ.
- Advertisement -