- Advertisement -
- Advertisement -
ಸುಬ್ರಮಣ್ಯ; ಟೀಂ ಇಂಡಿಯಾದ ತ್ರೋಡೌನ್ ತಜ್ಞ ರಾಘವೇಂದ್ರ ಅವರು ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ರು. ಈ ವೇಳೆ ಸುಬ್ರಮಣ್ಯ ದೇವರಿಗೆ ಅವರು ವಿಶೇಷ ಪೂಜೆ ಸಲ್ಲಿಸಿದರು.
ಟಿ20 ವಿಶ್ವಕಪ್ ಗೆದ್ದ ಬಳಿಕ ರಾಘವೇಂದ್ರ ಕುಕ್ಕೆ ದೇವಸ್ಥಾನಕ್ಕೆ ಆಗಮಿಸಿದ್ದು, ಈ ಹಿಂದೆ ದೇವಸ್ಥಾನಕ್ಕೆ ಬಂದ ಸಂದರ್ಭ ಟೀಂ ಇಂಡಿಯಾ ವಿಶ್ವಚಾಂಪಿಯನ್ ಆದರೆ ಸೇವೆ ನೆರವೇರಿಸುವುದಾಗಿ ಪ್ರಾರ್ಥನೆ ಸಲ್ಲಿಸಿದ್ದರಂತೆ. ಅದರಂತೆ ಬುಧವಾರ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇಗುಲದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಮತ್ತು ಮಹಾಭಿಷೇಕದ ಪ್ರಸಾದ ನೀಡಿದರು.ಬಳಿಕ ಶ್ರೀ ದೇವಸ್ಥಾವದ ಆಡಳಿತ ಕಚೇರಿಗೆ ತೆರಳಿದ ಅವರನ್ನು ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜು ಸ್ವಾಗತಿಸಿದರು.
- Advertisement -