Sunday, June 29, 2025
Homeತಾಜಾ ಸುದ್ದಿಕುಕ್ಕೆ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಟೀಂ ಇಂಡಿಯಾದ ತ್ರೋಡೌನ್ ತಜ್ಞ  ರಾಘವೇಂದ್ರ

ಕುಕ್ಕೆ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಟೀಂ ಇಂಡಿಯಾದ ತ್ರೋಡೌನ್ ತಜ್ಞ  ರಾಘವೇಂದ್ರ

spot_img
- Advertisement -
- Advertisement -

ಸುಬ್ರಮಣ್ಯ; ಟೀಂ ಇಂಡಿಯಾದ ತ್ರೋಡೌನ್ ತಜ್ಞ ರಾಘವೇಂದ್ರ ಅವರು ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ರು. ಈ ವೇಳೆ ಸುಬ್ರಮಣ್ಯ ದೇವರಿಗೆ ಅವರು ವಿಶೇಷ ಪೂಜೆ ಸಲ್ಲಿಸಿದರು.

ಟಿ20 ವಿಶ್ವಕಪ್ ಗೆದ್ದ ಬಳಿಕ ರಾಘವೇಂದ್ರ ಕುಕ್ಕೆ ದೇವಸ್ಥಾನಕ್ಕೆ ಆಗಮಿಸಿದ್ದು, ಈ ಹಿಂದೆ ದೇವಸ್ಥಾನಕ್ಕೆ ಬಂದ ಸಂದರ್ಭ ಟೀಂ ಇಂಡಿಯಾ ವಿಶ್ವಚಾಂಪಿಯನ್ ಆದರೆ ಸೇವೆ ನೆರವೇರಿಸುವುದಾಗಿ ಪ್ರಾರ್ಥನೆ ಸಲ್ಲಿಸಿದ್ದರಂತೆ. ಅದರಂತೆ ಬುಧವಾರ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇಗುಲದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಮತ್ತು ಮಹಾಭಿಷೇಕದ ಪ್ರಸಾದ ನೀಡಿದರು.ಬಳಿಕ ಶ್ರೀ ದೇವಸ್ಥಾವದ ಆಡಳಿತ ಕಚೇರಿಗೆ ತೆರಳಿದ ಅವರನ್ನು ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜು ಸ್ವಾಗತಿಸಿದರು.

- Advertisement -
spot_img

Latest News

error: Content is protected !!