- Advertisement -
- Advertisement -
ಬೆಂಗಳೂರು: ಕನ್ನಡ ಸಿನಿಮಾ ಕ್ಷೇತ್ರದಲ್ಲಿ ನಟರು ಕೇವಲ ನಟರಲ್ಲ. ಕನ್ನಡ ಜನ ಅವರೊಡನೆ ಒಂದು ಅವಿನಾಭಾವ ಸಂಭಂದ ಹೊಂದಿರುತ್ತಾರೆ. ಹಾಗೆಯೇ ಸಾಹಸಸಿಂಹ ದಿ. ಡಾ. ವಿಷ್ಣುವರ್ಧನ್ ಅವರೂ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ.ದಿ. ಡಾ. ವಿಷ್ಣುವರ್ಧನ್ ಬಗ್ಗೆ ತೆಲುಗು ನಟ ವಿಜಯ್ ರಂಗರಾಜು ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದು, ಇದರಿಂದ ವಿಷ್ಣುದಾದರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ವೇಳೆ ವಿಷ್ಣುದಾದರ ಬಗ್ಗೆ ವಿಜಯ್ ರಂಗರಾಜು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.ಈ ಕುರಿತು ಸೋಶಿಯಲ್ ಮೀಡಿಯಾದಲ್ಲೂ ಗಲಾಟೆ ಎದ್ದಿದೆ.ಈ ಬಗ್ಗೆ ಅಭಿಮಾನಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ವಿಷ್ಣು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
- Advertisement -