Thursday, May 2, 2024
Homeಕರಾವಳಿಪುತ್ತೂರು; ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ತಾತ್ಕಾಲಿಕ ತಡೆ

ಪುತ್ತೂರು; ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ತಾತ್ಕಾಲಿಕ ತಡೆ

spot_img
- Advertisement -
- Advertisement -

ಪುತ್ತೂರು; ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ ತಾತ್ಕಾಲಿಕ ತಡೆ ನೀಡಿದೆ.ಹಿಂಜಾವೇ ಜಿಲ್ಲಾ ಸಹ ಸಂಯೋಜಕ ದಿನೇಶ್​ ಪಂಜಿಗ ಮತ್ತು ವೇಣೂರು ವಲಯದ ಮುಖಂಡ ಯಶೋಧರ ಅವರನ್ನು ಕರ್ನಾಟಕ ಪೊಲೀಸ್​ ಕಾಯ್ದೆ ಕಲಂ 55 ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್​ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್​ ಜಾರಿ ನೀಡಿದ್ದರು.

ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ನೊಟೀಸ್​ಗೆ ತಡೆಯಾಜ್ಞೆ ನೀಡಿದ್ದಾರೆ.ಮತ್ತು ಆಪಾದಿತರ ವಿರುದ್ಧದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!