- Advertisement -
- Advertisement -
ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಎಚ್ಎಂಟಿ ಪ್ರದೇಶದ ಬಳಿ ಇಬ್ಬರು ಭಾರತೀಯ ಸೈನಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಸ್ತಿನಲ್ಲಿದ್ದ ಸೈನಿಕರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಟ್ರಕ್ನಲ್ಲಿ ಅಡಗಿದ್ದ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ದಾಳಿ ಸಂಭವಿಸಿದೆ. ಈ ದಾಳಿಗೆ ಪ್ರತಿಯಾಗಿ ಇಂದಿನ ದಾಳಿ ನಡೆದಿರಬಹುದೆಂದು ಶಂಕಿಸಲಾಗಿದೆ.
- Advertisement -