- Advertisement -
- Advertisement -
ಉಡುಪಿ: ಪಠ್ಯಪುಸ್ತಕ ಪರಿಷ್ಕರಣೆ ಚರ್ಚೆ ವಿಚಾರವಾಗಿ ಶಿಕ್ಷಣ ಸಚಿವರ ಬಳಿ ಸಮಗ್ರ ವರದಿ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿಕೆ ನೀಡಿದ ಸ್ವಾಮೀಜಿಗಳು ಪತ್ರ ಬರೆದಿದ್ದಾರೆ, ಪರಿಷ್ಕರಣೆ ಸರಿ ಮತ್ತು ತಪ್ಪು ಎಂಬ ಚರ್ಚೆಗಳು ನಡೆಯುತ್ತಿವೆ, ಹಾಗಾಗಿ ಸಚಿವರು ನಾಳೆ ವರದಿ ಕೊಟ್ಟ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಪಾಠ ವಾಪಸ್ ಪಡೆಯಬೇಕು ಎಂದವರ ಬಳಿ ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
- Advertisement -