ಮಾಣಿ: ಯಕ್ಷಗಾನ ಸಮಿತಿ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿ.ಕೊಂಬಿಲ ನಾರಾಯಣ ಶೆಟ್ಟಿ ಸಂಸ್ಮರಣೆ ಮತ್ತು 38ನೇ ವರ್ಷದ ತಾಳಮದ್ದಲೆ ಕೂಟ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿತು.
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಜಡ್ತಿಲ ಪ್ರಹ್ಲಾದ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈ, ಲೆಕ್ಕಪರಿಶೋಧಕ ಕಾರ್ಕಳ ಶಿವಾನಂದ ಪೈ, ಕೊಂಬಿಲ ಯತಿರಾಜ್ ಶೆಟ್ಟಿ ಭಾಗವಹಿಸಿದ್ದರು.
ಬೆಂಗಳೂರಿನ ಹೈಕೋರ್ಟ್ ವಕೀಲರಾದ ಸುಧಾಕರ ಪೈ, ಮಾಣಿ ಉಪಸ್ಥಿತರಿದ್ದರು.ಯಕ್ಷಗಾನ ಸಮಿತಿಯ ಅಧ್ಯಕ್ಷ ಮೋಹನ್ ಪೈ ಸ್ವಾಗತಿಸಿದರು. ಸಮಿತಿಯ ಸದಸ್ಯ ಕೆ.ವಿ.ರಮಣ್ ಸಂಸ್ಮರಣಾ ಮಾತುಗಳನ್ನಾಡಿದರು.ಸಮಿತಿಯ ಕಾರ್ಯದರ್ಶಿ ಬಾಲಕೃಷ್ಣ ಆಳ್ವ, ಕೊಡಾಜೆ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ರಾಮ ಪರಂಧಾಮ ತಾಳಮದ್ದಲೆ ನಡೆಯಿತು.