Thursday, May 2, 2024
Homeಕರಾವಳಿಉಡುಪಿಬೈಂದೂರು: 7 ವರ್ಷಗಳ ಹಿಂದೆ ನಡೆದಿದ್ದ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವಕ

ಬೈಂದೂರು: 7 ವರ್ಷಗಳ ಹಿಂದೆ ನಡೆದಿದ್ದ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವಕ

spot_img
- Advertisement -
- Advertisement -

ಬೈಂದೂರು: 2015 ರ ಜು .14 ರಂದು ನಡೆದಿದ್ದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಶಿಷ್ ಎಂಬ ಯುವಕ ಇಂದು ಮೃತಪಟ್ಟಿದ್ದಾರೆ .

ಆಶಿಷ್ ( 21 ) ತನ್ನ ಸೈಕಲ್ ನಲ್ಲಿ ಕಾಲೇಜಿಗೆ ಹೋಗಿ ಸಂಜೆ ಗೊಳಿಹೊಳೆ ಅಂಗನವಾಡಿ ಕೇಂದ್ರದ ಬಳಿ ಹೋಗುತ್ತಿದ್ದ ವೇಳೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬಂದ ಸವಾರ ಆಶಿಷ್ ನ ಸೈಕಲ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ .

ಆಶಿಷ್ ಗೆ ತಲೆಯ ಭಾಗಕ್ಕೆ ತೀವ್ರ ಸ್ವರೂಪದ ಗಾಯ ಉಂಟಾಗಿತ್ತು . ಈ ವೇಳೆ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದರು . ಆ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆಶಿಷ್ ಅವರಿಗೆ ವೈದ್ಯರ ಸಲಹೆಯಂತೆ ಔಷದವನ್ನು ನೀಡಿ ಆರೈಕೆ ಮಾಡಲಾಗುತ್ತಿತ್ತು .

ನಿನ್ನೆ ಅವರ ಆರೋಗ್ಯ ಸ್ಥಿತಿ ಮತ್ತೆ ಉಲ್ಬಣಗೊಂಡಿತ್ತು. ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ . ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!