ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಲವು ಪೋಲಿಸ್ ಠಾಣೆಗಳಲ್ಲಿ ಮಂಗಳೂರಿನ ಹಲವು ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಕಾಂಡೋಮ್, ಫ್ಯಾನ್ಸಿ ಕರೆನ್ಸಿ ನೋಟು ಹಾಗೂ ಅದರ ಮೇಲೆ ಅವಹೇಳನಕಾರಿ ಬರಹಗಳನ್ನು ಬರೆದು, ಬಿಳಿ ಚೀಟಿಯಲ್ಲಿ ಅವಹೇಳನಕಾರಿ ಬರಹಗಳನ್ನು ಹಾಕಿ ವಿಕೃತಿ ಮೆರೆಯುತ್ತಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಇದೀಗ ಈ ಎಲ್ಲಾ ಪ್ರಕರಣಕ್ಕೂ ಒಬ್ಬನೇ ಕಾರಣ, ಆತನೇ ಈ ಎಲ್ಲಾ ಕೃತ್ಯ ಮಾಡಿರುವುದು ಎಂದು ಪೋಲಿಸರ ತನಿಖೆಯಲ್ಲಿ ಬಯಲಾಗಿದ್ದು, ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಿತ್ರ ನಗರ, ಕೋಟಕಾರು, ಮಂಗಳೂರಿನ ದೇವದಾಸ್ ದೇಸಾಯಿ (62 ವರ್ಷ) ಎಂದು ಗುರುತಿಸಲಾಗಿದೆ.
ಮಂಗಳೂರು ನಗರ ಪೋಲಿಸ್ ಕಮೀಷನರೇಟ್ ವ್ಯಾಪ್ತಿಯ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ . 02/2021, ಮಂಗಳೂರು ಪೂರ್ವ ಪೊಲೀಸ್ ಠಾಣೆ ಅ.ಕ್ರ . 03/2021, ಉಳ್ಳಾಲ ಪೊಲೀಸ್ ಠಾಣಾ ಅ.ಕ್ರ . 08/2021, ಉರ್ವಾ ಪೊಲೀಸ್ ಠಾಣಾ ಅ.ಕ್ರ . 14/2021, ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ . 177/2021 ರಂತೆ ಹಲವು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣದ ವಿವರ ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ, ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ, ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಪು ನಾಗನ ಕಟ್ಟೆ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ,
ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ, ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ,
ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ, ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು, ಕೋಟ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿ ಸ್ಟಾಂಡ್, ಆದಿ ಮಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು.