Sunday, May 5, 2024
Homeತಾಜಾ ಸುದ್ದಿಭಗವಾನ್‌ ಶ್ರೀರಾಮನ ಹೆಸರಿನಲ್ಲಿ ರಾರಾಜಿಸಲಿದೆ ಅಯೋಧ್ಯೆಯ ವಿಮಾನ ನಿಲ್ದಾಣ!..

ಭಗವಾನ್‌ ಶ್ರೀರಾಮನ ಹೆಸರಿನಲ್ಲಿ ರಾರಾಜಿಸಲಿದೆ ಅಯೋಧ್ಯೆಯ ವಿಮಾನ ನಿಲ್ದಾಣ!..

spot_img
- Advertisement -
- Advertisement -

ಲಕ್ನೋ: ಕೆಲವು ತಿಂಗಳ ಹಿಂದಷ್ಟೇ ಅಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿಯ ಸಮಸ್ಯೆ ಇತ್ಯರ್ಥವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಅಯೋಧ್ಯೆಗೆ ವಿಮಾನದ ಮೂಲಕ ಭೇಟಿ ನೀಡುವ ಪ್ರವಾಸಿಗರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವಾಗಲೇ ಅವರಿಗೆ ರಾಮನ ಸಾನಿಧ್ಯದ ಘಮ ನೀಡುವ ನಿಟ್ಟಿನಲ್ಲಿ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹೊಸ ಯೋಜನೆ ರೂಪಿಸಿದ್ದಾರೆ.

ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದು ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಈ ನಿರ್ಧಾರಕ್ಕೆ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ವಿಮಾನ ನಿಲ್ದಾಣವೆಂದು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಯೋಜನೆ ರೂಪಿಸಿದ.

- Advertisement -
spot_img

Latest News

error: Content is protected !!