- Advertisement -


- Advertisement -
ಬಂಟ್ವಾಳ: ಡಿ. 8 ರಂದು ವೆಲಂಕಣಿ ಮಾತೆ ದೇವಾಲಯ ಫರ್ಲದ ವಾರ್ಷಿಕ ಮಹೋತ್ಸವವು ನಡೆಯಿತು.
ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷರಾದ ಅತೀ ವಂದನೀಯ ಆರ್.ಟಿ ರೇವ್ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ಅವರಿದ್ದರು. ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು. ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು.
ವಾರ್ಷಿಕ ಮಹೋತ್ಸವದಲ್ಲಿ ಊರ, ಪರವೂರ ಅನೇಕ ಭಕ್ತರು ಭಾಗವಹಿಸಿದ್ದರು.
- Advertisement -


