Wednesday, April 16, 2025
Homeತಾಜಾ ಸುದ್ದಿಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ನಿವೃತ್ತ ಯೋಧರೊಬ್ಬರ ಬರ್ಬರ ಹತ್ಯೆ

ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ನಿವೃತ್ತ ಯೋಧರೊಬ್ಬರ ಬರ್ಬರ ಹತ್ಯೆ

spot_img
- Advertisement -
- Advertisement -

ಬೆಂಗಳೂರು: ನಿವೃತ್ತ ಯೋಧರೊಬ್ಬರಿಗೆ ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಕೊಲೆಯಾದವರನ್ನು ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್‌ (56) ಎಂದು ತಿಳಿಸಲಾಗಿದೆ.

ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸುರೇಶ್‌, ಕೆಲ ವರ್ಷಗಳ ಹಿಂದೆ ಪತ್ನಿಗೆ ವಿಚ್ಛೇದನ ನೀಡಿ ತಾಯಿಯೊಂದಿಗೆ ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರು ಬಳಿ ಗೌತಮ್ ಕಾಲೋನಿಯಲ್ಲಿ ವಾಸವಾಗಿದ್ದರು.

ಮೂರು ವರ್ಷಗಳ ಹಿಂದೆ ತಾಯಿ ಮೃತಪಟ್ಟ ಬಳಿಕ ಒಬ್ಬರೆ ಮನೆಯಲ್ಲಿದ್ದರು. ಈ ಮಧ್ಯೆ ಸಂಬಂಧಿಕರ ನಡುವೆ ಆಸ್ತಿ ವಿಚಾರವಾಗಿ ಒಂದಷ್ಟು ವೈಷಮ್ಯಗಳಿದ್ದು ಗಲಾಟೆ ನಡೆಯುತ್ತಿತ್ತು‌ . ಸೋದರ ಸಂಬಂಧಿಗಳು ಆಗಾಗ್ಗೆ ಮನೆಗೆ ಬಂದು ಸುರೇಶ್‌ಗೆ ಧಮ್ಕಿ ಹಾಕಿ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಮಧ್ಯಾಹ್ನದ ವೇಳೆ ಮನೆಯ ಹಿಂಬಾಗಿಲ ಮೂಲಕ ಒಳ ನುಗ್ಗಿರುವ ದುಷ್ಕರ್ಮಿಗಳು, ಮೊದಲಿಗೆ ಖಾರದ ಪುಡಿಯನ್ನು ಸುರೇಶ್‌ ಮುಖಕ್ಕೆ ಎರಚಿದ್ದಾರೆ. ಬಳಿಕ ಸುತ್ತಿಗೆಯಿಂದ ತಲೆಗೆ ಹೊಡೆದು ಪರಾರಿ ಆಗಿದ್ದಾರೆ.

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನೆರೆ ಮನೆಯವರು ಸುರೇಶ್‌ಗೆ ಮೊಬೈಲ್‌ ಕರೆ ಮಾಡಿದ್ದು ಫೋನ್‌ ಸ್ವಿಚ್ಚ್ ಆಫ್ ಆಗಿದ್ದ ಹಿನ್ನಲೆಯಲ್ಲಿ ಮನೆ ಬಳಿ ಹೋಗಿ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲ್ಲ. ನಂತರ ಕಿಟಕಿ ತೆರೆದು ನೋಡಿದಾಗ ಮಧ್ಯದ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಸುರೇಶ್‌ ಬಿದ್ದಿದ್ದು, ಕೂಡಲೇ ಅವರ ಸಂಬಂಧಿಕರಿಗೆ ಕರೆ ಮಾಡಿದ್ದಾರೆ ಎಂದು ಪೊಲೀಸರು ಘಟನೆ ಬಗ್ಗೆ ವಿವರಿಸಿದ್ದಾರೆ.

- Advertisement -
spot_img

Latest News

error: Content is protected !!