- Advertisement -
- Advertisement -
ಬೆಳ್ತಂಗಡಿ: ಉಪ್ಪಿನಂಗಡಿಯಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಪಿಎಫ್ಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ಹಾಗೂ ದಾಂಧಲೆ ಮಾಡಿರುವುದನ್ನು ಬೆಳಂಗಡಿ ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.
ಮುಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
- Advertisement -