Monday, June 8, 2026
Homeಕರಾವಳಿಮಂಗಳೂರು: ಬೈಕ್ ಗೆ ದಿಢೀರ್ ಅಡ್ಡ ಬಂದ ಜಿಂಕೆ; ಬೈಕ್ ಪಲ್ಟಿಯಾಗಿ ಗಾಯಗೊಂಡಿದ್ದ ಬೈಕ್ ಸವಾರ...

ಮಂಗಳೂರು: ಬೈಕ್ ಗೆ ದಿಢೀರ್ ಅಡ್ಡ ಬಂದ ಜಿಂಕೆ; ಬೈಕ್ ಪಲ್ಟಿಯಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವು

- Advertisement -
- Advertisement -

ಮಂಗಳೂರು: ಬೈಕ್ ಗೆ ದಿಢೀರ್ ಜಿಂಕೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಗಾಯಗೊಂಡು ಸಾವನ್ನಪ್ಪಿದ ಘಟನೆ ಶಿವವೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಾಯಾ ಗ್ರಾಮದಲ್ಲಿ ನಡೆದಿದೆ. ಸತೀಶ್‌ (46) ಮೃತ ಬೈಕ್ ಸವಾರ.

ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್‌ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್‌ ಎದುರಾದ ಜಿಂಕೆಗೆ ಬೈಕ್‌ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸತೀಶ್‌ ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು.

ಹಾಯಾ ಗ್ರಾಮದ ದೇವರಾಜ್‌ ಎಂಬುವವರಿಗೆ ಸತೀಶ್‌ ಕರೆ ಮಾಡಿ ಅಪಘಾತದ ವಿಷಯ ತಿಳಿಸಿದ್ದರು. ಕೂಡಲೆ ಸತೀಶ್‌ರನ್ನು ಸೊರಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಲೂರಿನ ವೆನ್‌ಲಾಕ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸತೀಶ್‌ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!