- Advertisement -
- Advertisement -
ಬೆಂಗಳೂರು: ಆರ್. ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಸ್ಪದವಾಗಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಘಟನೆ ನಡೆದಿದೆ.
ಕಾರು ರಸ್ತೆಯಲ್ಲಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನ ಒಳಭಾಗದಲ್ಲಿ ವ್ಯಕ್ತಿ ಮೃತದೇಹ ಸಂಪೂರ್ಣ ಸುಟ್ಟಿದೆ. ಮೃತಪಟ್ಟಿರುವ ವ್ಯಕ್ತಿ 40 ವರ್ಷದ ದರ್ಶನ್ ಎಂಬ ಮಾಹಿತಿ ಲಭ್ಯವಾಗಿದೆ.
ದರ್ಶನ್ ಉತ್ತರಹಳ್ಳಿ ನಿವಾಸಿಯಾಗಿದ್ದು, ಕುಟುಂಬದವರ ಸಂಪರ್ಕ ಮಾಡಿದ್ದೇವೆ. ಬಿಪಿಓ ಕಂಪೆನಿಯಲ್ಲಿ ಅಡ್ಮಿನಾಗಿ ದರ್ಶನ್ ಕೆಲಸ ಮಾಡ್ತಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಘಟನೆ ಕುರಿತು ಬೆಂ.ಉತ್ತರ ವಿಭಾಗ ಸಂಚಾರ ಡಿಸಿಪಿ ಸವಿತಾ ಹೇಳಿಕೆ ನೀಡಿದ್ದಾರೆ.
- Advertisement -