Sunday, April 28, 2024
Homeಕರಾವಳಿತಿರುವನಂತಪುರಂ: ಪಿಯುಸಿ ವಿದ್ಯಾರ್ಥಿನಿ ಮೃತ ದೇಹ ಬಾವಿಯಲ್ಲಿ ಪತ್ತೆ !

ತಿರುವನಂತಪುರಂ: ಪಿಯುಸಿ ವಿದ್ಯಾರ್ಥಿನಿ ಮೃತ ದೇಹ ಬಾವಿಯಲ್ಲಿ ಪತ್ತೆ !

spot_img
- Advertisement -
- Advertisement -

ತಿರುವನಂತಪುರಂ: ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ . ಮೃತಳನ್ನು ಶಾಂತವನ ( 19 ) ಎಂದು ಪತ್ತೆ ಹಚ್ಚಲಾಗಿದೆ.

ಈಕೆ ಕೇರಳ ಇರಿಂಜಲಕುಡ ನಿವಾಸಿಯಾಗಿದ್ದು , ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ .

ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಇವರ ಪುತ್ರಿ ಶಾಂತವನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೃತದೇಹವನ್ನು ಇರಿಂಜಲಕುಡದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ .

ಈ ಸಂಬಂಧ ಕಟ್ಟೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದಾಗ ಆಕೆಯ ಪಾಲಕರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಸದ್ಯ ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿನ್ಸೂರ್ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿದೆ .

- Advertisement -
spot_img

Latest News

error: Content is protected !!