Friday, March 29, 2024
Homeಕರಾವಳಿಬೆಳ್ತಂಗಡಿ : ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವ ವಿಚಾರ: ಜುಲೈ...

ಬೆಳ್ತಂಗಡಿ : ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವ ವಿಚಾರ: ಜುಲೈ 7 ರಂದು ಬೃಹತ್ ಪ್ರತಿಭಟನೆ

spot_img
- Advertisement -
- Advertisement -

ಬೆಳ್ತಂಗಡಿ :10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಕೈಬಿಟ್ಟಿರುವುದನ್ನು ಖಂಡಿಸಿ ವಿರುದ್ಧ ಜುಲೈ 4 ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸದ ಗುರುಗಳಿಗೆ ಮತ್ತು ಅವರ ಅನುಯಾಯಿಗಳಿಗೆ ಅವಮಾನ ಮಾಡಿರುವ ರಾಜ್ಯ ಸರಕಾರದ ಹಠಮಾರಿ ಧೋರಣೆಯ ವಿರುದ್ಧ ದಿನಾಂಕ: 04.07.2022 ರಂದು ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಬೆಳ್ತಂಗಡಿ ಬಸ್ಸು ತಂಗುದಾಣದಲ್ಲಿ ಬೆಳಗ್ಗೆ 10.30 ಕ್ಕೆ ಸರಿಯಾಗಿ ಬೃಹತ್‌ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.

ಈ ಪತ್ರಿಕಾಗೋಷ್ಠಿಯಲ್ಲಿ  ಚಿದಾನಂದ ಎಳ್ದಕ್ಕ ಅಧ್ಯಕ್ಷರು ಬಿಲ್ಲವ ವೇದಿಕೆ ಬೆಳ್ತಂಗಡಿ, ಜಯವಿಕ್ರಮ್ ಕಳ್ಳಪು ಪ್ರಧಾನ ಕಾರ್ಯಡರ್ಶಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ನಿತೀಶ್ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಭಾಗವಹಿಸಿದ್ದರು.

ಈ ಸಭೆಗೆ ಸಮಾಜಬಾಂಧವರು, ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ.

- Advertisement -
spot_img

Latest News

error: Content is protected !!