- Advertisement -
- Advertisement -
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ
ಕಾಪು ತಾಲೂಕಿನ ಉಚ್ಚಿಲ ಮೂಲದ ವೈಷ್ಣವ್ ಮೃತ ವಿದ್ಯಾರ್ಥಿ. ಕುಟುಂಬದವರೊಂದಿಗೆ ಬೆಂಗಳೂರಿಂದ ವಾಪಾಸ್ಸಾಗುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನಿಬ್ಬರು ಮಹಿಳೆಯರಿಗೂ ಗಂಭೀರ ಗಾಯಗಳಾಗಿದೆ.
ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -