- Advertisement -
- Advertisement -
ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ಸುಳ್ಯ-ಆಲೆಟ್ಟಿ ರಸ್ತೆಯ ಗಾಂಧಿನಗರ ಸಮೀಪ ಗುರುಂಪು ಎಂಬಲ್ಲಿ ನಡೆದಿದೆ.
ರಸ್ತೆ ಬದಿಯ ಆಳದ ಕಂದಕಕ್ಕೆ ಕಾರು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಕಲಿಸಿದ್ದಾರೆ.
ಸುಳ್ಯದಿಂದ ಕಾಸರಗೋಡು ಕಡೆ ಹೋಗುತ್ತಿದ್ದ ಕಾರಿನಲ್ಲಿ 5 ಮಂದಿ ಪ್ರಯಾಣಿಕರಲ್ಲಿ ಇಬ್ಬರಿಗೆ ಗಾಯಗಳಾಗಿದೆ. ಕಾರು ಜಖಂಗೊಂಡಿದೆ. ರಸ್ತೆಯ ಕೆಳ ಭಾಗದಲ್ಲಿ ಕಟ್ಟಡ ಹಾಗೂ ರಸ್ತೆ ಮಧ್ಯೆಯ ಕಂದಕಕ್ಕೆ ಕಾರು ನಿಯಂತ್ರಣ ತಪ್ಪಿ ಬಿದ್ದಿದೆ. ಕೆಳಭಾಗದಲ್ಲಿ ಇರುವ ಮನೆಯ ಗೋಡೆಗೂ ಹಾನಿಯಾಗಿದೆ.
- Advertisement -