ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ತನಿಖೆ ವಿಳಂಬವಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ರೆಡ್ಡಿ ಮೇಲಿನ ಕೇಸ್ಗಳ ವಿಚಾರಣೆಯಲ್ಲಿ 12 ವರ್ಷಗಳ ವಿಳಂಬವಾಗಿದೆ. ಇದು ನಿಜಕ್ಕೂ ಕ್ಷಮಾರ್ಹವಲ್ಲ. ತನಿಖೆ ತ್ವರಿತಕ್ಕೆ ಈ ಹಿಂದೆಯೇ ಆದೇಶ ನೀಡಿದ್ದರೂ ವಿಳಂಬ ಮಾಡುತ್ತಿರುವುದೇಕೆ?. ವಿಚಾರಣೆ ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ವರದಿ ನೀಡಲು ತನಿಖಾಧಿಕಾರಿಗಳಿಗೆ ಕೋರ್ಟ್ ಸೂಚಿಸಿತು.
2009 ರಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಸಿಬಿಐ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರ 9 ಮಂದಿ ವಿರುದ್ಧ ಕೇಸ್ ದಾಖಲಾಗಿತ್ತು. ಸೆಪ್ಟೆಂಬರ್ 5, 2011 ರಂದು ಜನಾರ್ದನ ರೆಡ್ಡಿಯನ್ನು ಬಂಧಿಸಲಾಯಿತು. ಬಳಿಕ ಸಾಕ್ಷ್ಯ ನಾಶ ಮಾಡುವ ಶಂಕೆಯ ಮೇಲೆ ಕರ್ನಾಟಕದ ಬಳ್ಳಾರಿ, ಕಡಪ, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಿಗೆ ಭೇಟಿ ನೀಡುವಂತಿಲ್ಲ ಎಂಬ ಷರತ್ತಿನೊಂದಿಗೆ ಸುಪ್ರೀಂಕೋರ್ಟ್ ಜನವರಿ 20, 2015 ರಂದು ಅವರಿಗೆ ಜಾಮೀನು ನೀಡಿತ್ತು.