Friday, June 27, 2025
Homeಕರಾವಳಿಉಡುಪಿಉಳ್ಳಾಲ: ರೌಡಿಶೀಟರ್‌ ಆರೀಫ್ ಕೊಲೆಯತ್ನ ಪ್ರಕರಣ: ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಉಳ್ಳಾಲ: ರೌಡಿಶೀಟರ್‌ ಆರೀಫ್ ಕೊಲೆಯತ್ನ ಪ್ರಕರಣ: ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಉಳ್ಳಾಲ: ಕಳೆದ ಮಂಗಳವಾರ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿರುವ ರೌಡಿಶೀಟರ್ ಅಜ್ಜಿನಡ್ಕ, ಮುಳ್ಳುಗುಡ್ಡೆ ನಿವಾಸಿ ಆರೀಫ್ ಕೊಲೆಯತ್ನ ಪ್ರಕರಣದ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮೇಲಂಗಡಿ ನಿವಾಸಿ ಅಬ್ದುಲ್ ಕರೀಂ(46) ಪೈಝಲ್‌ನಗರ ನಿವಾಸಿಗಳಾದ ಪುಚ್ಚ ನಿಶಾಕ್(25) ಮೊಹಮ್ಮದ್ ಅಲ್ಪಾಕ್(26) ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್(25)ಮಾರ್ನಮಿಕಟ್ಟೆ ನಿವಾಸಿ ರಿಫಾತ್ (27)ಬಂಧಿತ ಆರೋಪಿಗಳು.

ರೌಡಿಶೀಟರ್ ಆರೀಫ್ ಮತ್ತು ಅಬ್ದುಲ್ ಕರೀಂ ಜೊತೆಯಾಗಿ ವ್ಯವಹಾರ ಮಾಡುತ್ತಿದ್ದು, ಕರೀಂ ಎಂಬಾತ ಆರೀಫ್ ನಿಂದ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಆರೀಫ್ ಸಾಲ ನೀಡಿದ ಹಣ ವಾಪಾಸ್ ನೀಡುವಂತೆ ಕರೀಂನಲ್ಲಿ ಕೇಳಿದ್ದ. ಈ ವಿಚಾರವನ್ನು ಕರೀಂ ನೌಫಾಲ್ ಬಳಿ ತಿಳಿಸಿದ್ದ ಎನ್ನಲಾಗಿದೆ. ನೌಫಾಲ್ ಆರೀಫ್‌ಗೆ ಕರೆ ಮಾಡಿ ಎಲ್ಲಾ ಹಣ ವಾಪಾಸ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದ. ಇದೇ ವಿಚಾರದಲ್ಲಿ ಅವರ ಮಧ್ಯೆ ಸಂಘರ್ಷ ನಡೆದಿದ್ದು,ನೌಫಾಲ್ ತನ್ನ ಸ್ನೇಹಿತರಾದ ನಿಶಾಕ್, ಅಲ್ಪಾಕ್, ಫಾರೂಕ್ ಮತ್ತು ರಿಫಾತ್ ಗೆ ಕೊಲೆ ಮಾಡಲು ಸುಫಾರಿ ನೀಡಿದ್ದ ಎಂಬುದು ತನಿಖೆಯ ವೇಳೆ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!