- Advertisement -
- Advertisement -
ಪಣಂಬೂರು: ಉಡುಪಿಯಿಂದ ಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಎಪಿಎಂಸಿಯ ಎದುರುಗಡೆ ಕಾರ್ಮಿಕನೋರ್ವನ ಮೃತದೇಹ ಪತ್ತೆಯಾಗಿದೆ.
ಮೃತಪಟ್ಟವರು ಒಡಿಶಾದ ರಶ್ಮಿರಂಜನ್ (44) ಎಂದು ಗುರುತಿಸಲಾಗಿದೆ. ಅವರು ಎಪಿಎಂಸಿ ಯಾರ್ಡ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ತಡರಾತ್ರಿ ರಸ್ತೆ ದಾಟುವ ಸಂದರ್ಭದಲ್ಲಿ ಅಪರಿಚಿತ ವಾಹನವು ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
- Advertisement -