- Advertisement -
- Advertisement -
ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ.
ಉಡುಪಿಯಿಂದ ಮೂವರು ಯುವಕರು ಆರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4-45 ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದೆ.
- Advertisement -