Wednesday, June 24, 2026
Homeಆರಾಧನಾಭೂ ಕೈಲಾಸ ಕಾರಿಂಜ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ

ಭೂ ಕೈಲಾಸ ಕಾರಿಂಜ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ

- Advertisement -
- Advertisement -

ಬಂಟ್ವಾಳ: ಭೂ ಕೈಲಾಸ ಕ್ಷೇತ್ರ ಕಾರಿಂಜದ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆಯನ್ನು ಪಡೆದು ನಂತರದಲ್ಲಿ ಸರಪಾಡಿ ಗ್ರಾಮದ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕಾರಿಂಜ ಕ್ಷೇತ್ರಕ್ಕೆ ಕೊಂಡೊಯ್ಯಲಾಯಿತು.

ಪ್ರತಿವರ್ಷದಂತೆ ಈ ವರ್ಷ ಕೂಡ ತೆನೆ ಹಬ್ಬವನ್ನು ಆಚರಿಸಲಾಗಿದ್ದು, ಶ್ರೀ ಕ್ಷೇತ್ರದಿಂದ ದೇವರು ಸುಮಾರು 9 ಕಿ.ಮೀ. ದೂರಕ್ಕೆ ಆಗಮಿಸಿ ಒಟ್ಟು 7 ಕಟ್ಟೆಗಳಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಸೂರ್ಯೋದಯಕ್ಕೆ ಮುನ್ನಾ ಕಾರಿಂಜ ಕ್ಷೇತ್ರದಿಂದ ದೇವರನ್ನು ಹೊತ್ತು ಕೊಂಡು ವಾದ್ಯ ವೃಂದ ಸಹಿತ ತಂತ್ರಿಗಳು, ಅರ್ಚಕರು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲೇ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದುಕ್ಕು ಕಟ್ಟೆ, ಭಂಡಾರಿಕಟ್ಟೆ, ಸಮಗಾರಕಟ್ಟೆಯ ಬಳಿಕ ಕೊನೆಗೆ ಈಶ್ವರ ಸನ್ನಿಧಿಯ ಹಲ್ಲಂಗಾರು ಆಗಮಿಸಿ ಇಲ್ಲಿಂದ ತೆನೆಗಳನ್ನು ಕೊಂಡೊಯ್ಯಲಾಗುತ್ತದೆ.

ಇನ್ನು ನಂಬಿಕೆಯ ಪ್ರಕಾರ ಜೈನ ಮನೆತನದ ಲೀಲಾವತಿ ಅಮ್ಮನವರಿಗೆ ಸೇರಿದ ಕಂಬಳದ ಗದ್ದೆಯಲ್ಲಿ ಬಂಗಾರದ ತೆನೆ ಬೆಳೆದಿದೆ ಎಂದು ಅಲ್ಲಿಂದ ತೆನೆಗಳನ್ನು ಪಡೆದು ಕಾರಿಂಜದಲ್ಲಿ ಸಂಪ್ರದಾಯಗಳು ನೆರವೇರಿದ ಬಳಿಕ ಭಕ್ತರಿಗೆ ಹಂಚಲಾಗುತ್ತದೆ. ಅದರ ಜೊತೆಗೆ ಪ್ರತಿ ಕಟ್ಟೆಗಳು ಸಹಿತ ಹಲ್ಲಂಗಾರು ಕಟ್ಟೆಯಲ್ಲೂ ಹೆಚ್ಚಿನ ಭಕ್ತರು ಸೇರಿ ತೆನೆಗಳನ್ನು ಪಡೆದು ಮನೆ ತುಂಬಿಸಿಕೊಂಡು ಹೊಸ ಅಕ್ಕಿ ಊಟ ಮಾಡುವ ಕಾರ್ಯ ನಡೆಸಿದರು.

- Advertisement -

Latest News

error: Content is protected !!