- Advertisement -
- Advertisement -
ಉಡುಪಿ: ನಾಗಬನದಲ್ಲಿದ್ದ ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆ ಜ.25ರಂದು ರಾತ್ರಿ ವಶಕ್ಕೆ ಪಡೆದುಕೊಂಡಿದೆ..
ಮೂಡುಬೆಳ್ಳಿ ನಿವಾಸಿ ಅಶೋಕ ಬಂಧಿತ ಆರೋಪಿ. ಈತ ಅಂಬಲಪಾಡಿ ಶ್ಯಾಮಿಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ಎನ್ನಲಾಗಿದೆ. ಬಂಧಿತನಿಂದ 43 ಕೆ.ಜಿ. ಹಸಿ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ.
- Advertisement -