Sunday, June 7, 2026
Homeತಾಜಾ ಸುದ್ದಿಬೆಳ್ತಂಗಡಿ; ಅನಾರೋಗ್ಯದಿಂದಾಗಿ ಬಾಲಕಿ ನಿಧನ

ಬೆಳ್ತಂಗಡಿ; ಅನಾರೋಗ್ಯದಿಂದಾಗಿ ಬಾಲಕಿ ನಿಧನ

- Advertisement -
- Advertisement -

ಬೆಳ್ತಂಗಡಿ; ಅನಾರೋಗ್ಯದಿಂದಾಗಿ ಬಾಲಕಿ ನಿಧನವಾಗಿರುವ ಘಟನೆ ಶಿಶಿಲ ಗ್ರಾಮದ ಪೆರಿಕೆ ಎಂಬಲ್ಲಿ ನಡೆದಿದೆ. ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ ಬಾಲಕಿ.

ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.ಮಂಗಳವಾರ (ಜುಲೈ 9) ರಂದು ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮನೆಗೆ ಹಿಂದಿರುಗುವ ಮಾರ್ಗ ಮಧ್ಯೆ ಆಕೆ ಪ್ರಜ್ಞಾಹೀನಳಾಗಿದ್ದಳು. ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ವೈದ್ಯರು ಆಕೆ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ. ಸುಪ್ರೀತಾ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!