Thursday, May 2, 2024
Homeತಾಜಾ ಸುದ್ದಿರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು, ನೈಟ್ ಕರ್ಫ್ಯೂ ಮುಂದುವರಿಕೆ

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು, ನೈಟ್ ಕರ್ಫ್ಯೂ ಮುಂದುವರಿಕೆ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದುಪಡಿಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ತಾಂತ್ರಿಕ ಸಲಹಾ ಸಮಿತಿ ವಾರಾಂತ್ಯದ ಕರ್ಪ್ಯೂ ರದ್ದುಪಡಿಸುವಂತೆ ಶಿಫಾರಸು ಮಾಡಿತ್ತು . ಆದರೆ ಬೆಂಗಳೂರಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಬಗ್ಗೆ ಪ್ರಸ್ತಾಪ ಮಾಡಿದೆ . ವೀಕೆಂಡ್ ಕರ್ಪ್ಯೂ ಹೊರತುಪಡಿಸಿ ಇತರ ಮಾರ್ಗಗಳ ಮೂಲಕ ನಿರ್ಬಂಧ ಕ್ರಮ ಜಾರಿಗೆ ಸಲಹೆ ನೀಡಿತ್ತು .

ಇಂದು ನಡೆದ ಈ ಮಹತ್ವದ ಸಭೆಯಲ್ಲಿ ಸಚಿವರಾದ ಡಾ.ಕೆ ಸುಧಾಕರ್ , ಆರಗ ಜ್ಞಾನೇಂದ್ರ , ಆರ್ . ಅಶೋಕ್ ಗೋವಿಂದ್ ಕಾರಜೋಳ , ಬಿ.ಸಿ ನಾಗೇಶ್ ಭಾಗಿಯಾಗಿದ್ದರು . ಅಂತೆಯೇ ವಿಶ್ವ ಆರೋಗ್ಯ ಸಂಸ್ಥೆಯ ಓರ್ವ ಪ್ರತಿನಿಧಿ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ . ಸುದರ್ಶನ್ , ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ . ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!