Wednesday, May 15, 2024
Homeಕರಾವಳಿಉಡುಪಿಉಡುಪಿ: ಗೋರಕ್ಷಕರ ಮೇಲೆ ವಾಹನ ಚಲಾಯಿಸಿದ ಕಿಡಿಗೇಡಿಗಳಿಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು- ಪೇಜಾವರ ಶ್ರೀ ಮನವಿ

ಉಡುಪಿ: ಗೋರಕ್ಷಕರ ಮೇಲೆ ವಾಹನ ಚಲಾಯಿಸಿದ ಕಿಡಿಗೇಡಿಗಳಿಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು- ಪೇಜಾವರ ಶ್ರೀ ಮನವಿ

spot_img
- Advertisement -
- Advertisement -

ಉಡುಪಿ: ಅಕ್ರಮ ಗೋಸಾಗಾಟವನ್ನು ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ವಾಹನ ಚಲಾಯಿಸಿ ಮಾರಣಾಂತಿಕ ಹತ್ಯೆ ನಡೆಸಿರುವ ಘಟನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರತಿಕ್ರಿಯೆ ನೀಡಿದ್ದಾರೆ.

ಇಂತಹ ಘಟನೆ ನಿಜಕ್ಕೂ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಈ ರೀತಿ ಸವಾಲೆಸೆಯುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು. ಗೋಹತ್ಯಾನಿಷೇಧ ಕಾನೂನು ಕೇವಲ ಜಾರಿಗೆ ತಂದು ಪ್ರಯೋಜನವಿಲ್ಲ. ಅದರ ಪರಿಣಾಮಕಾರಿ ಅನುಷ್ಠಾನ ಆಗಬೇಕು. ಸರ್ಕಾರಗಳು ಈ ಬಗ್ಗೆ ಪೂರ್ಣ ಇಚ್ಛಾಶಕ್ತಿ ತೋರಬೇಕು. ಇತ್ತೀಚಿನ ದಿನಗಳಲ್ಲಂತೂ ಗೋಹತ್ಯೆ , ಗೋಸಾಗಾಟಗಳು ಯಾವುದೇ ಮುಲಾಜಿಲ್ಲದೇ ನಡೆಯುತ್ತಿರುವುದು ತೀರಾ ಆತಂಕಕಾರಿಯಾಗಿದೆ.

ಗೋವುಗಳನ್ನು ರಕ್ಷಿಸಲು ಸರ್ಕಾರ ತುರ್ತಾಗಿ ಮುಂದಾಗಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾವೆಚ್ಚವನ್ನು ಸರ್ಕಾರ ನೋಡಿಕೊಳ್ಳಬೇಕು. ಈ ಕಾರ್ಯಕರ್ತರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!