Saturday, May 4, 2024
Homeಕರಾವಳಿಅಳದಂಗಡಿಯ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಕರ್ನಾಟಕ ರಾಜ್ಯಪಾಲರ ಭೇಟಿ

ಅಳದಂಗಡಿಯ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಕರ್ನಾಟಕ ರಾಜ್ಯಪಾಲರ ಭೇಟಿ

spot_img
- Advertisement -
- Advertisement -

ಅಳದಂಗಡಿ : ಧರ್ಮಸ್ಥಳದ ಲಕ್ಷ ದೀಪೋತ್ಸವದ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರು ಧರ್ಮಸ್ಥಳ ಕಾರ್ಯಕ್ರಮ ಮುಗಿಸಿ ಉಡುಪಿಗೆ ತೆರಳುವ ಸಂದರ್ಭ ಅಳದಂಗಡಿಗೆ ಭೇಟಿ ನೀಡಿದರು .

ಇಲ್ಲಿನ ತುಳು ನಾಡಿನ ಪ್ರಸಿದ್ಧ ಅಳದಂಗಡಿಯ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ ಸತ್ಯದೇವತೆ ದೈವದ ಗಗ್ಗರ ಸೇವೆ ವೀಕ್ಷಿಸಿ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭ ಅಳದಂಗಡಿ ಅರಮನೆಯ ಅರಸರಾದ ಡಾ.ಪದ್ಮ ಪ್ರಸಾದ್ ಅಜಿಲ ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತಸರ ಶಿವಪ್ರಸಾದ್ ಅಜಿಲ ಹಾಗೂ ಮತ್ತಿತರರು ಉಪಸ್ಥಿತರಿದ್ದರು .

- Advertisement -
spot_img

Latest News

error: Content is protected !!