- Advertisement -
- Advertisement -
ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
ರಾಜ್ಯಪಾಲರು ಇಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಹಾಗೇ ಅವರನ್ನು ಜಿಲ್ಲಾಡಳಿತ ಆತ್ಮೀಯವಾಗಿ ಸ್ವಾಗತಿಸಿತು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ರಾಜ್ಯಪಾಲರನ್ನು ಸ್ವಾಗತಿಸಿದರು. ನಂತರ ರಾಜ್ಯಪಾಲರು ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.
ಹಾಗೇ ಡಿಸೆಂಬರ್ 3 ರಂದು ಬೆಳಗ್ಗೆ 8. 05 ಕ್ಕೆ ಶ್ರೀ ಕೃಷ್ಣಮಠಕ್ಕೆ ಭೇಟಿ, 9. 45 ಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮುರುಡೇಶ್ವರಕ್ಕೆ ತೆರಳಲಿದ್ದಾರೆ.
- Advertisement -