- Advertisement -
- Advertisement -
ಮಂಗಳೂರು: ಕರಾವಳಿಯ ಶಾಲಾ-ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಒಂದು ಸಣ್ಣ ವಿಚಾರ. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ ಖಾದರ್ ಸಲಹೆ ನೀಡಿದ್ದಾರೆ.
ಈ ಬಗ್ಗೆ ನಗರದ ಸರ್ಕೂಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿ ವಿದ್ಯಾರ್ಥಿನಿಯರ ವಿದ್ಯಾಭ್ಯಾಸ ಮುಖ್ಯವಾಗಿರುತ್ತದೆ. ಇದರಲ್ಲಿ ರಾಜಕೀಯ ಮಾಡಬಾರದು. ಸ್ಥಳೀಯವಾಗಿ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ವಿಷಯದಲ್ಲಿ ಪಾಕಿಸ್ತಾನದ ವಿಚಾರ ತಂದು ಕಾಮೆಂಟ್ ಮಾಡುವುದು ಅಪ್ರಸ್ತುತ . ಕಾಲೇಜು ಕ್ಯಾಂಪಸ್ ಒಳಗೆ ಹೋದ ವಿದ್ಯಾರ್ಥಿಗಳ ಬಗ್ಗೆ, ವಿದ್ಯಾರ್ಥಿ ಸಂಘದ ಚಿಂತಿಸಬೇಕಿಲ್ಲ ಎಂದು ಹೇಳಿದ್ದಾರೆ.
- Advertisement -