- Advertisement -
- Advertisement -
ಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಪರಿಸರದಲ್ಲಿ ಒಂದೇ ದಿನ ನಾಲ್ಕು ಮಂದಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಂಗನ ಕಾಯಿಲೆ ಬಗ್ಗೆ ಆತಂಕ ಹೆಚ್ಚಾಗಿದ್ದು, ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತೆ ದೃಷ್ಟಿಯಿಂದ ವಿಶೇಷ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಮಂಗಳೂರು ತಾಲೂಕು ವೈದ್ಯರು ಭಾಗವಹಿಸಿದ್ದು, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಆನ್ ಲೈನ್ ಮೂಲಕ ಪಾಲ್ಗೊಂಡಿದ್ದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಮಂಗನ ಕಾಯಿಲೆ ಬಾರದಂತೆ ಯಾವ ರೀತಿಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು, ರ್ಯಾಂಡಮ್ ಪರೀಕ್ಷೆ ಮಾಡುವ ವಿಧಾನ, ಒಂದು ವೇಳೆ ಕಾಯಿಲೆ ದೃಢಪಟ್ಟರೆ ಮುಂದೆ ಅನುಸರಿಸಬೇಕಾದ ಕ್ರಮ ಸಹಿತವಾಗಿ ವಿವಿಧ ವಿಚಾರಗಳ ಬಗ್ಗೆ ಸೂಚನೆಗಳನ್ನು ನೀಡಿದರು.
- Advertisement -