Wednesday, May 22, 2024
Homeಇತರಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

spot_img
- Advertisement -
- Advertisement -

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ನಡೆದಿದೆ. ಮೂಡಿಗೆರೆ ಮೂಲದ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ನಾಪತ್ತೆಯಾದ ವ್ಯಕ್ತಿ.

ನಾಗೇಶ್ ಕಳೆದ ನಾಲ್ಕು ದಿನಗಳ ಹಿಂದೆ ಕೃಷ್ಣೇಗೌಡ ಎಂಬುವರ ಜೊತೆ ಜೀಪ್​ನಲ್ಲಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಕೆಲಸಕ್ಕೆಂದು ತೆರಳಿದ್ದರು. ಆದರೆ ಸದ್ಯ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಕೃಷ್ಣೇಗೌಡರು ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದರು. ಗುರುವಾರ ಬೆಳಗ್ಗೆ 8 ಗಂಟೆಗೆ ಕೃಷ್ಣೇಗೌಡರ ಜೀಪ್​ನಲ್ಲೇ ತೆರಳಿದ್ದರು ಆದರೆ ಈಗ ಕರೆ ಮಾಡಿ ನಿಮ್ಮ ಗಂಡ ಇಲ್ಲ ಅಂತಾ ಹೇಳುತ್ತಿದ್ದಾರೆ ಎಂದು ನಾಗೇಶ್ ಆಚಾರ್ ಪತ್ನಿ ಕಣ್ಣೀರು ಹಾಕಿದ್ದಾರೆ.

ಕಣ್ಮರೆಯಾಗಿರುವ ವ್ಯಕ್ತಿಗಾಗಿ ಚಾರ್ಮಾಡಿ ಘಾಟ್​ನಲ್ಲಿ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!