- Advertisement -
![]()
- Advertisement -
ಬೆಳ್ತಂಗಡಿ: ಶಾಲಾ ಮಕ್ಕಳು ಬೆಳೆಸಿದ್ದ ಕಷ್ಟಪಟ್ಟು ಬೆಳೆಸಿದ್ದ ಹೂವಿನ ಗಿಡಗಳನ್ನು ಕಿಡಿಗೇಡಿಗಳು ಹಾಳುಗೆಡವಿದ ಘಟನೆ ಬೆಳ್ತಂಗಡಿ ತಾಲೂಕಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೊಡಿತ್ತಾಯಕಟ್ಟೆ ಎಂಬಲ್ಲಿ ನಡೆದಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಹಿನ್ನಲೆ ನಿನ್ನೆ ಶಾಲೆಗೆ ರಜೆ ನೀಡಿದ್ದರಿಂದ ಶಾಲೆಯಲ್ಲಿ ಯಾರೂ ಇರಲಿಲ್ಲ. ಇದೇ ಸಮಯವನ್ನು ಬಳಸಿಕೊಂಡ ಕಿಡಿಗೇಡಿಗಳು ಶಾಲೆಗಳು ಬಂದು ಹೂವಿನ ಕುಂಡಗಳನ್ನು ಹಾಳುಗೆಡವಿದ್ದಾರೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಇಲ್ಲಿ ಮಕ್ಕಳು ತರಕಾರಿ ಗಿಡಗಳನ್ನೂ ಕೂಡ ಬೆಳೆಸಿದ್ದಾರೆ. ಅದರ ಮೇಲೂ ಕಿಡಿಗೇಡಿಗಳ ಕಣ್ಣು ಬೀಳು ಸಾಧ್ಯತೆ ಇದೆ ಎಂಬ ಭಯದಿಂದ ಶಾಲಾ ಶಿಕ್ಷಕ ವೃಂದ ನಮಗೆ ರಕ್ಷಣೆ ಬೇಕು ಎಂದಿದ್ದಾರೆ.
- Advertisement -


