- Advertisement -
- Advertisement -
ಉಡುಪಿ: ಚಿರತೆ ಮರಿಯೊಂದನ್ನು ಹಿಡಿದ ಬೆನ್ನಲ್ಲೇ ಕಳೆದ ಮೂರು ದಿನಗಳಿಂದ ತಾಯಿ ಚಿರತೆ ಪೆರ್ಡೂರಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಇದೀಗ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ತಾಯಿ ಚಿರತೆ ಬಿದ್ದಿದ್ದು ಗ್ರಾಮಸ್ಥರು ನಿರಾಳರಾಗಿದ್ದಾರೆ.
ಮೂರು ದಿನಗಳ ಹಿಂದೆ ಈ ಭಾಗದಲ್ಲಿ ಚಿರತೆ ಮರಿಯೊಂದನ್ನು ಹಿಡಿದು ಆಗುಂಬೆಗೆ ಬಿಡಲಾಗಿತ್ತು. ಹೀಗಾಗಿ ಈ ತಾಯಿ ಚಿರತೆ ತನ್ನ ಮರಿಯನ್ನು ಅರಸಿಕೊಂಡು ಇಲ್ಲಿಗೆ ಬಂದಿತ್ತು. ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರದಿಂದ ಯಶಸ್ವಿ ಕಾರ್ಯಾಚರಣೆ ನಡೆದಿದ್ದು ಚಿರತೆ ಬೋನಿಗೆ ಬಿದ್ದಿದೆ.
- Advertisement -