- Advertisement -
- Advertisement -
ಮೈಸೂರು : ಮದುವೆಯಾಗಿ ನಾಲ್ಕು ತಿಂಗಳಲ್ಲೇ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ .
ಮೃತ ನವದಂಪತಿ ಗ್ರಾಮದ ರಾಕೇಶ್ ( 25 ) , ಅರ್ಚನಾ ( 20 ) ಎಂದು ಗುರುತಿಸಲಾಗಿದೆ.
ಇಬ್ಬರೂ ಒಂದೇ ಊರಿನ ಅಕ್ಕಪಕ್ಕದ ಮನೆಯವರಾಗಿದ್ದರು. ಇವರಿಬ್ಬರೂ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು.
ಪೋಷಕರ ವಿರೋಧದ ನಡುವೆಯೂ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಗ್ರಾಮದ ಊರ ಹೊರವಲವಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ . ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
- Advertisement -