Wednesday, July 3, 2024
Homeತಾಜಾ ಸುದ್ದಿಕಡಬ: ತೋಟಕ್ಕೆ ಹೋದ ವೇಳೆ ವಿಷದ ಹಾವು ಕಡಿದು ವ್ಯಕ್ತಿ ಸಾವು

ಕಡಬ: ತೋಟಕ್ಕೆ ಹೋದ ವೇಳೆ ವಿಷದ ಹಾವು ಕಡಿದು ವ್ಯಕ್ತಿ ಸಾವು

spot_img
- Advertisement -
- Advertisement -

ಕಡಬ: ತೋಟಕ್ಕೆ ಸ್ಪಿಂಕ್ಲರ್ ಅಳವಡಿಸಲು ಹೋದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ ಎಂದು ಗುರುತಿಸಲಾಗಿದೆ.

ಇವರು ತಮ್ಮ‌ ಮನೆಯ ಹತ್ತಿರದಲ್ಲಿರುವ ತೋಟಕ್ಕೆ ಸ್ಪ್ರಿಂಕ್ಲರ್ ಅಳವಡಿಸಲು ಹೋದ ಸಂದರ್ಭ ಯಾವುದೋ ವಿಷದ ಹಾವೊಂದು ಅವರ ಕಾಲಿಗೆ ಕಡಿದಿದ್ದು, ತಕ್ಷಣ ಅವರು ಮನೆಯ ಹತ್ತಿರ ಬರುತ್ತಿದ್ದಂತೆಯೇ ಪ್ರಜ್ಞೆ ತಪ್ಪಿ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!