- Advertisement -
- Advertisement -
ಬೆಂಗಳೂರು: ಈಗಾಗಲೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.ರೂಪಾಂತರಗೊಂಡ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿಕೆ ಕುರಿತು ಚರ್ಚೆ ನಡೆಯುತ್ತಿದೆ.
ಜನರೂ ಆತಂಕಕ್ಕೊಳಗಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.ಈಗಾಗಲೇ ತಾಂತ್ರಿಕ ಸಮಿತಿ ಜೊತೆ ಚರ್ಚಿಸಿ ಈ ಹಿಂದೆ ತೀರ್ಮಾನಿಸಿದಂತೆ ಜನವರಿ 1ರಿಂದ ಎಸ್ ಎಸ್ ಎಲ್ ಮತ್ತು ಪಿಯುಸಿ ತರಗತಿಗಳು ಆರಂಭಗೊಳಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
- Advertisement -