Thursday, May 2, 2024
Homeತಾಜಾ ಸುದ್ದಿವಿದ್ಯಾರ್ಥಿನಿಯ ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ..! ಮನನೊಂದು ಆತ್ಮಹತ್ಯೆಗೆ ಯತ್ನ; ಬಾವಿಗೆ ಹಾರಿದ್ರೆ ಬಾವಿಲಿ ನೀರಿಲ್ಲ

ವಿದ್ಯಾರ್ಥಿನಿಯ ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ..! ಮನನೊಂದು ಆತ್ಮಹತ್ಯೆಗೆ ಯತ್ನ; ಬಾವಿಗೆ ಹಾರಿದ್ರೆ ಬಾವಿಲಿ ನೀರಿಲ್ಲ

spot_img
- Advertisement -
- Advertisement -

ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು (ಹಾಲ್ ಟಿಕೆಟ್) ಕುರಿ ತಿಂದಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಗ್ರಾಮದ ನಿವಾಸಿ ಪೂಜಾ ಮಾರುತಿ ಮೇತ್ರೆ(14).

ಘಟನೆಯ ವಿವರ: ಗ್ರಾಮದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿನಿಯ ಪ್ರವೇಶ ಪತ್ರವನ್ನು ಸೋಮವಾರ ರಾತ್ರಿ ಕುರಿ ತಿಂದು ಹಾಕಿತು. ಇದರಿಂದ ಆತಂಕಗೊಂಡು ಈಕೆ ಶಾಲೆಯ ಮುಖ್ಯ ಗುರುಗಳ ಹೆಸರಿನಲ್ಲಿ ಒಂದು ಪತ್ರ ಬರೆದಿದ್ದು, ʼನನ್ನ ಪರೀಕ್ಷೆ ಪ್ರವೇಶ ಪತ್ರ ಕಳೆದ ಕಾರಣ ನನಗೆ ಶಾಲೆಗೆ ಬರಲು ಆಗಲ್ಲ. ನಾನು ಸತ್ತು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಬಿಡಿʼ ಎಂದು ವಿವರಿಸಿದ್ದಾಳೆ.

ಅಣ್ಣನ ಕೈಗೆ ಪತ್ರವನ್ನು‌ ಕೊಟ್ಟು ಸಂಜೆ 7 ಗಂಟೆ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಸ್ಥಳೀಯರು ಹುಡುಕಾಟ ಆರಂಭಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ಈಕೆ ತನ್ನ ಸಂಬಂಧಿಕರ ಜಮೀನಿನಲ್ಲಿಯ ಬಾವಿಯಲ್ಲಿ ಅಳುತ್ತ ಕುಳಿತಿರುವುದು ಕೇಳಿ ಬಳಿಕ ಆಕೆಯನ್ನು ರಕ್ಷಣೆ ಮಾಡಿ ಬಾವಿಯಿಂದ ಮೇಲೆ ತರಲಾಯಿತು.

ಸುಮಾರು 30 ಅಡಿಗಳಷ್ಟು ಆಳವಾಗಿರುವ ಬಾವಿಯಲ್ಲಿ ನೀರು ಕಡಿಮೆ ಇರುವ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಂಗಳವಾರ ಎಂದಿನಂತೆ ಪರೀಕ್ಷೆಗೆ ಹಾಜರಾಗಿದ್ದಾಳೆ.

- Advertisement -
spot_img

Latest News

error: Content is protected !!