- Advertisement -
- Advertisement -
ಉಡುಪಿ: ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಈ ಬಿಟ್ ಗೋವಾ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ಮುಳುಗಡೆಗೊಂಡಿದೆ.
ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ.ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ತಳಭಾಗಕ್ಕೆ ವಸ್ತುವೊಂದು ಢಿಕ್ಕಿ ಹೊಡೆದ ಪರಿಣಾಮ ಬೋಟಿನ ಹಲ್ ಒಡೆದು ನೀರುತುಂಬಿತು. ಸಮೀಪದಲ್ಲಿದ್ದ ಮಾಹೂರ್ ಬೋಟಿನವರು ಮುಳುಗಡೆಯಾಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.
ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು. ಎಂದು ವರದಿಯಾಗಿದೆ. ಬೋಟ್ಸು ಮುಳುಗಡೆ ಯಿಂದ ಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ
- Advertisement -