- Advertisement -
- Advertisement -
ಕಾರವಾರ: 8 ಕ್ವಿಂಟಾಲ್ ಗೋಮಾಂಸವಿದ್ದ ಮೀನಿನ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಕುಮಟಾ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ವಾಹನ ಪಲ್ಟಿಯಾಗುತ್ತಿದ್ದಂತೆ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದು ಆರೋಪಿಗಳಿಗೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಇನ್ನು ವಾಹನ ಶಿರಸಿಯಿಂದ ಕುಮಟಾ ಮಾರ್ಗವಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -