ಉಡುಪಿ: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಜಾರಿ ಮಾಡಿರುವ ವಾರಾಂತ್ಯ ಕರ್ಪ್ಯೂವನ್ನು ಜಿಲ್ಲಾಧಿಕಾರಿಯವರು ರದ್ದುಪಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿತ್ತು.
ಜಿಲ್ಲೆಯಲ್ಲಿ ವಾರಾಂತ್ಯ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಸರಕಾರದ ಆದೇಶದಂತೆ ಕಟ್ಟು ನಿಟ್ಟಾಗಿ ಜಾರಿಯಲ್ಲಿರಲಿದ್ದು , ಜಿಲ್ಲೆಯ ಜನರೂ ವದಂತಿಗಳಿಗೆ ಕಿವಿಕೊಡಬಾರದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಸ್ಪಷ್ಟತೆಯನ್ನು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಪ್ಯೂವನ್ನು ಜಿಲ್ಲಾಧಿಕಾರಿಯವರು ರದ್ದುಪಡಿಸಿರುತ್ತಾರೆ ಎಂಬ ವಿಡಿಯೋ ಒಂದು ಹರಿಡಾದುತ್ತಿದ್ದು , ಜನರಲ್ಲಿ ಗೊಂದಲ ಸೃಷ್ಟಿ ಮಾಡಿದೆ . ಇದು ಒಂದು ಸುಳ್ಳು ಸುದ್ದಿಯಾಗಿದ್ದು , ಜಿಲ್ಲೆಯಲ್ಲಿ ವಾರಾಂತ್ಯ ಕರ್ಪ್ಯೂ ರದ್ದುಪಡಿಸಿಲ್ಲ . ಸರಕಾರದ ಆದೇಶದಂತೆ ಜ .19 ರ ಬೆಳಿಗ್ಗೆ 5.00 ಗಂಟೆವರೆಗೆ ಜಿಲ್ಲಾದ್ಯಂತ ನೈಟ್ ಕರ್ಪ್ಯೂ ಹಾಗೂ ವಾರಂತ್ಯ ಕರ್ಪೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ . ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ .