- Advertisement -
- Advertisement -
ಮಂಗಳೂರು: ಕುಡಿದ ಮತ್ತಿನಲ್ಲಿ ಯುವಕರು ಅಪಾರ್ಟ್ ಮೆಂಟ್ ಮುಂದೆ ಬಿಡಿಸಿದ್ದ ರಂಗೋಲಿ ಹಾಳುಗೆಡವಿದ ಘಟನೆ ಬಿಜೈಯಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ವೊಂದರ ಮುಂಭಾಗ ದೀಪಾವಳಿ ಹಬ್ಬಕ್ಕಾಗಿ ರಂಗೋಲಿ ಬಿಡಿಸಲಾಗಿತ್ತು. ಹಬ್ಬದ ಶುಭಾಶಯವನ್ನು ರಂಗೋಲಿಯಲ್ಲಿ ಬರೆದಿದ್ದಾರೆ. ಈ ದೀಪಾವಳಿ ರಂಗೋಲಿಯನ್ನು ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ವಿರೂಪಗೊಳಿಸಿದ್ದಾರೆ ಎನ್ನಲಾಗಿದೆ.
ಒಬ್ಬ ಕೈಯಲ್ಲಿ ಮದ್ಯದ ಬಾಟಲಿಯನ್ನು ಹಿಡಿದುಕೊಂಡಿದ್ದಾನೆ, ಮತ್ತೊಬ್ಬ ರಂಗೋಲಿಯನ್ನು ಮೆಟ್ಟಿ, ಅದನ್ನು ವಿರೂಪಗೊಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ತಿಳಿದು ಬಂದಿದೆ.
ಶಾಸಕ ವೇದವ್ಯಾಸ್ ಕಾಮತ್ ಫೇಸ್ ಬುಕ್ ನಲ್ಲಿ ಈ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
- Advertisement -