Thursday, June 26, 2025
Homeಕರಾವಳಿಮಂಗಳೂರುಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಗೋಡೌನ್ ನಲ್ಲಿದ್ದ ಲ್ಯಾಪ್ ಟಾಪ್ ಮತ್ತು ಹಣದ ಲಾಕರ್ ಕಳ್ಳತನ...

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಗೋಡೌನ್ ನಲ್ಲಿದ್ದ ಲ್ಯಾಪ್ ಟಾಪ್ ಮತ್ತು ಹಣದ ಲಾಕರ್ ಕಳ್ಳತನ ಪ್ರಕರಣ: ಅಂತರ್ ಜಿಲ್ಲಾ ಆರೋಪಿಯನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಗೋಡೌನ್ ನಲ್ಲಿದ್ದ ಲ್ಯಾಪ್ ಟಾಪ್ ಮತ್ತು ಹಣದ ಲಾಕರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಂದ್ರು(33) ಬಂಧಿತ ಆರೋಪಿ.

ಪ್ರಕರಣದ ವಿವರ;

ದಿನಾಂಕ 26-04-2025 ರಂದು ಸಂಜೆ 4.00 ಗಂಟೆಯಿಂದ ದಿನಾಂಕ: 28-04-2025 ರಂದು ಬೆಳಿಗ್ಗೆ. 07.25 ಗಂಟೆಯ ಮದ್ಯಾವಧಿಯಲ್ಲಿ ಮಾರ್ಪಾಡಿ ಗ್ರಾಮದ ಕಡಲಕೆರೆ ಇಂಡಸ್ಟ್ರೀಯಲ್ ಏರಿಯಾದ VILCART ಎಂಬ ಹೆಸರಿನ ಗೋಡೌನ್ ನ ಶಟರಿನ ಬೀಗವನ್ನು ಯಾರೋ ಕಳ್ಳರು ಮೀಟಿ ಗೋಡೌನ ಒಳಗೆ ಪ್ರವೇಶಿಸಿ ಗೋಡೌನ್ ನಲ್ಲಿದ್ದ 2 LAPTOP ಮತ್ತು ನಗದು ಹಣ ಇರುವ ಲಾಕರನ್ನು ಕಳ್ಳತನ ಮಾಡಲಾಗಿತ್ತು.

ಪ್ರಕರಣದ ಆರೋಪಿಗಳ ಮತ್ತು ಸೊತ್ತು ಪತ್ತೆಯ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಗೋಡೌನ್ ನಲ್ಲಿ ಕಳ್ಳತನ ಮಾಡಿದ ಅಂತರ್ ಜಿಲ್ಲಾ ಆರೋಪಿಯಾದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ತಡಕಲ್ ಗ್ರಾಮ ದ ಅಂಬೇಡ್ಕರ್ ಕಾಲೋನಿ ನಿವಾಸಿ ಚಂದ್ರು (33) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿ ಸತ್ಯ ಒಪ್ಪಿಕೊಂಡಿದ್ದಾನೆ.

ಅದರಂತೆ ಆರೋಪಿಯಿಂದ ಗೋಡೌನ್ ನಲ್ಲಿ ಕಳ್ಳತನ ಮಾಡಿದ H.P ಕಂಪನೀಯ 2 LAPTOP ಮತ್ತು ಲಾಕರ್ ಹಾಗೂ ಲಾಕರ್ ನಲ್ಲಿದ್ದ ಸುಮಾರು 2,88,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಮಹೀಂದ್ರ ಕಂಪನೀಯ ಬೊಲೇರೊ ಪಿಕಪ್ ವಾಹನವನ್ನು ಕೂಡ ಸ್ವಾಧೀನ ಪಡಿಸಿಕೊಂಡಿದ್ದಾರೆ. ಆರೋಪಿಯಿಂದ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,50,000  ರೂಪಾಯಿ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಪ್ರಕರಣದಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಮಾನ್ಯ DCP ಯವರಾದ ಶ್ರೀ ಸಿದ್ಧಾರ್ಥ ಗೊಯಲ್ IPS (ಕಾ&ಸು), ಶ್ರೀ ರವಿಶಂಕರ್ DCP (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಮಾನ್ಯ ACP ಶ್ರೀ ಶ್ರೀಕಾಂತ್.ಕೆ ರವರ ನಿರ್ದೇಶನದಂತೆ, ಈ ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ್ ಪಿ.ಜಿ ರವರ ನೇತೃತ್ವದ ತಂಡ ಪಿ.ಎಸ್.ಐ. ಶ್ರೀಮತಿ ಪ್ರತಿಭ ಕೆ.ಸಿ, ಹಾಗೂ ಎ.ಎಸ್.ಐ ರಾಜೇಶ್ ಮತ್ತು ಹೆಚ್.ಸಿ ಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್ ಲಮಾಣಿ ಮತ್ತು ಪಿ.ಸಿ ವೆಂಕಟೇಶ್ ರವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

- Advertisement -
spot_img

Latest News

error: Content is protected !!