- Advertisement -
- Advertisement -
ಮೂಡಬಿದಿರೆ: ಮಾರಿಗುಡಿಗೆ ನುಗ್ಗಿ ಮೂರು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀರು ಆರೋಪಿಯನ್ನು ಬಂಧಿಸಿದ್ದಾರೆ. ಹೆಜಮಾಡಿಯ ಕೊಕ್ರಾಣಿ ಗ್ರಾಮದ ಕಕ್ವಾ ನಿವಾಸಿ ವಿಜಯ ಯಾನೆ ಕೊಕ್ರಾಣಿ ವಿಜಯ್ ಬಂಧಿತ ಆರೋಪಿ.
ಈತ ಜ.15ರಂದು ಸ್ವರಾಜ್ಯ ಮೈದಾನದ ಬಳಿ ಇರುವ ಮಾರಿಗುಡಿಗೆ ನುಗ್ಗಿದ ಆರೋಪಿ ಗದ್ದುಗೆ ಮಂಟಪದಲ್ಲಿದ್ದ ಮೂರು ಕಾಣಿಕೆ ಡಬ್ಬಗಳನ್ನು ಕಳವುಗೈದಿದ್ದ. ನಿನ್ನೆ ಆರೋಪಿಯನ್ನು ಮೂಡಬಿದಿರೆ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ರಾತ್ರಿ ಮೂಡುಬಿದಿರೆಯ ಮಾರಿಗುಡಿಗೆ ಪ್ರವೇಶಿಸಿ ಕಾಣಿಕೆ ಡಬ್ಬಿಗಳನ್ನು ಕಳವುಗೈದಿದ್ದ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
- Advertisement -