ಮಂಗಳೂರು: ಚಿನ್ನಾಭರಣ ಕಳವುಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅರುಣ್ (20) ಬಂಧಿತ ಆರೋಪಿ.
ಅರುಣ್ ಮುಲ್ಕಿಯ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿಯ ಮನೆಯೊಂದರಿಂದ ಚಿನ್ನಾಭರಣ ಕಳವು ಗೈದಿದ್ದ. ಸದ್ಯ ಆರೋಪಿಯೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿ ಮೂಲತಃ ಎಂದು ತಿಳಿದು ಬಂದಿದೆ. ಆರೋಪಿಯಿಂದ ಕಳವುಗೈದಿದ್ದ 2.56 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನವೆಂಬರ್ 6 ರಂದು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲೋನಿಯಲ್ಲಿ ಮಲ್ಲಮ್ಮ ಎಂಬುವವರ ಮನೆಯ ಹಿಂಬಾಗಿಲ ಬೀಗ ಮುರಿದು ಒಳನುಗ್ಗಿದ ಆರೋಪಿಗಳು 64.200 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದರು. ಘಟನೆ ಕುರಿತು ಮಲ್ಲಮ್ಮ ಅವರು ನ.7ರಂದು ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.