- Advertisement -
- Advertisement -
ಪುತ್ತೂರು: ಕೆಲವು ದಿನಗಳ ಹಿಂದೆ ಬೆಟ್ಟಂಪಾಡಿಯಲ್ಲಿ ಸರಗಳ್ಳತನ ಮಾಡಿ ಬಳಿಕ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಮೂಲದ ಫಝಲ್ ಹಾಗೂ ಅಬ್ದುಲ್ ನಿಝಾರ್ ಬಂಧಿತ ಆರೋಪಿಗಳು.ಬಂಧಿತರಿಂದ 50 ಸಾವಿರ ಮೌಲ್ಯದ ತುಂಡಾದ ಕರಿಮಣಿ ಸರ, ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಎಫ್ ಝೆಡ್ ಬೈಕ್ ಹಾಗೂ ಕಳ್ಳತನಕ್ಕೆ ಬಳಸಿದ್ದ ರಾಯಲ್ ಎನ್ ಫೀಲ್ಡ್ ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಆರೋಪಿಗಳು ಬೇರೆ ಬೇರೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರು ಎನ್ನಲಾಗಿದೆ.2019ರಲ್ಲಿ ವಿಟ್ಲದ ಕುದ್ದುಪದವು ಎಂಬಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನ, ಕಾಶಿಮಠದಲ್ಲಿ ಗೂಡ್ಸ್ ಟೆಂಪೋ ಕಳ್ಳತನ, ಪುತ್ತೂರು ಬೈಪಾಸ್ ರಸ್ತೆಯಲ್ಲಿ ಮಹಿಳೆಯ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ,ಇನ್ನು ಆರೋಪಿ ಫಝಲ್ ವಿರುದ್ಧ ಉಳ್ಳಾಲ,ಮಂಜೇಶ್ವರ,ಕುಂಬ್ಳೆ,ಬದಿಯಡ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
- Advertisement -