Monday, June 30, 2025
Homeಕರಾವಳಿಉಡುಪಿಕಾಪು ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಕಳ್ಳತನ

ಕಾಪು ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಕಳ್ಳತನ

spot_img
- Advertisement -
- Advertisement -

ಕಾಪು: ದೇವಸ್ಥಾನದ ಬೀಗ ಮುರಿದು ಕಾಣಿಕೆ ಡಬ್ಬ ಒಡೆದು ಅದರಲ್ಲಿದ್ದ ಹಣವನ್ನು ಕಳ್ಳರು ದೋಚಿರುವ ಘಟನೆ ಕಾಪುವಿನ ಪ್ರಸಿದ್ಧ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ನಡೆದಿದೆ.

ಭಾನುವಾರ ಬೆಳಗ್ಗಿನ ಜಾವ ಕಾಣಿಕೆ ಡಬ್ಬಿ ಒಡೆದ ಕಳ್ಳರು ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಬರೀ ನೋಟುಗಳನ್ನು ಕದ್ದೊಯ್ದಿದ್ದಾರೆ. ದೇವಸ್ಥಾನದಲ್ಲಿ ರಾತ್ರಿ ವೇಳೆ ವಾಚ್‌ಮೆನ್‌ ಇದ್ದರೂ, ಆತ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ವಾಚ್ ಮೆನ್ ಗೆ ಎಚ್ಚರವಾದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!