Sunday, May 5, 2024
Homeಕರಾವಳಿಸುಳ್ಯದ ಮುರುಳ್ಯದಲ್ಲಿ ಸೊಸೈಟಿಗೆ ಕನ್ನ ಹಾಕಿದ ಖದೀಮರು: ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ಕಳವು

ಸುಳ್ಯದ ಮುರುಳ್ಯದಲ್ಲಿ ಸೊಸೈಟಿಗೆ ಕನ್ನ ಹಾಕಿದ ಖದೀಮರು: ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ಕಳವು

spot_img
- Advertisement -
- Advertisement -

ಸುಳ್ಯ: ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮುರುಳ್ಯ-ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಿದೆ.

ಅಲೆಕ್ಕಾಡಿಯಲ್ಲಿರುವ ಮುರುಳ್ಯ-ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ಕಟ್ಟಡದಲ್ಲಿರುವ ಮಾನಿಟರ್-2, ಕಂಪ್ಯೂಟರ್ -1, ಸೇರಿದಂತೆ ಎಲ್ ಇಡಿ ಸ್ಮಾರ್ಟ್ ಟಿವಿಗಳು ಸೇರಿದಂತೆ 1.52 ಲಕ್ಷದ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳುವು ಮಾಡಲಾಗಿದೆ. ಮಾರ್ಚ್ 18 ರಿಂದ ಮಾರ್ಚ್ 30ರೊಳಗೆ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಇಂದು ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಅಲೆಕ್ಕಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ದೂರು ನೀಡಿದ್ದು, ಬೆಳ್ಳಾರೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!